ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
TSK
TSK · ಯೆಶಾಯ 46:1
مراجع Treasury of Scripture Knowledge في ಕನ್ನಡ IRV.
ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.
ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ
ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.