ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
TSK
TSK · ಯೆಶಾಯ 46:11
مراجع Treasury of Scripture Knowledge في ಕನ್ನಡ IRV.
ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ.
ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.
ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.