ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
TSK
TSK · ಯೆಶಾಯ 47:12
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
¶ ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು.
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,