ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
TSK
TSK · ಯೆಶಾಯ 47:14
مراجع Treasury of Scripture Knowledge في ಕನ್ನಡ IRV.
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.
ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›
¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.