‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
TSK
TSK · ಯೆಶಾಯ 47:3
مراجع Treasury of Scripture Knowledge في ಕನ್ನಡ IRV.
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.
“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
¶ ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.
ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.