TSK

TSK · ಯೆಶಾಯ 47:9

مراجع Treasury of Scripture Knowledge في ಕನ್ನಡ IRV.

العودة إلى المقطع

ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.

ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.