ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
TSK
TSK · ಯೆಶಾಯ 48:1
مراجع Treasury of Scripture Knowledge في ಕನ್ನಡ IRV.
¶ “‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
¶ ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
¶ ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.
ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.
ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,
ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,
‹“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ› ‹ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.›
ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು ‹“ಇಗೋ,›‹ಇವನು ನಿಜವಾದ ಇಸ್ರಾಯೇಲನು,›‹ಇವನಲ್ಲಿ ಕಪಟವಿಲ್ಲ”› ಎಂದು ಹೇಳಿದನು.
¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
¶ ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,
‹ನಾನು ನಿನ್ನ ಸಂಕಟವನ್ನೂ›‹ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ›‹ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ›‹ಸಭಾಮಂದಿರದವರಾಗಿದ್ದಾರೆ.›