ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
TSK
TSK · ಯೆಶಾಯ 48:10
مراجع Treasury of Scripture Knowledge في ಕನ್ನಡ IRV.
“ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.