ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
TSK
TSK · ಯೆಶಾಯ 48:11
مراجع Treasury of Scripture Knowledge في ಕನ್ನಡ IRV.
ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.
‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.
‹ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.›