“ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು.
TSK
TSK · ಯೆಶಾಯ 48:2
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
¶ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.