ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
TSK
TSK · ಯೆಶಾಯ 49:5
مراجع Treasury of Scripture Knowledge في ಕನ್ನಡ IRV.
ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
‹ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.›
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›
‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›
‹ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.›
ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.