ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.
TSK
TSK · ಯೆಶಾಯ 5:12
مراجع Treasury of Scripture Knowledge في ಕನ್ನಡ IRV.
ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›