ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
TSK
TSK · ಯೆಶಾಯ 5:24
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.
ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು
ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.
ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
‹ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ”› ಅಂದನು.
“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.