ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.
TSK
TSK · ಯೆಶಾಯ 5:8
مراجع Treasury of Scripture Knowledge في ಕನ್ನಡ IRV.
ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
¶ “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›