ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
TSK
TSK · ಯೆಶಾಯ 50:2
مراجع Treasury of Scripture Knowledge في ಕನ್ನಡ IRV.
ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.
ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.
ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,
ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”
ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ ‹“ಶಾಂತವಾಗಿರು, ಮೊರೆಯಬೇಡ”› ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›