ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
TSK
TSK · ಯೆಶಾಯ 51:9
مراجع Treasury of Scripture Knowledge في ಕನ್ನಡ IRV.
ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.
ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
¶ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.
‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.
ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.
ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.