ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.
TSK
TSK · ಯೆಶಾಯ 52:1
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!
ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.
ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
¶ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
‹ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,›
ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.