¶ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.
TSK
TSK · ಯೆಶಾಯ 53:10
مراجع Treasury of Scripture Knowledge في ಕನ್ನಡ IRV.
ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.
ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
‹ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,›
‹ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.›
‹ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು›‹ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.›
ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
¶ ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.