ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
TSK
TSK · ಯೆಶಾಯ 53:6
مراجع Treasury of Scripture Knowledge في ಕನ್ನಡ IRV.
ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
¶ ‹“ನಿಮ್ಮಲ್ಲಿ›‹ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?›
ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.