ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
TSK
TSK · ಯೆಶಾಯ 54:7
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
¶ ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.
¶ “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›
ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.