TSK

TSK · ಯೆಶಾಯ 55:12

مراجع Treasury of Scripture Knowledge في ಕನ್ನಡ IRV.

العودة إلى المقطع

ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.

ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.

ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.

ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.

ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.

ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.

¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,