ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
TSK
TSK · ಯೆಶಾಯ 55:13
مراجع Treasury of Scripture Knowledge في ಕನ್ನಡ IRV.
ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.
¶ ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.
ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.