ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಯೆಶಾಯ 55:3
مراجع Treasury of Scripture Knowledge في ಕನ್ನಡ IRV.
ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು.
ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.
ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
‹“ಆದರೆ ನೀವು ಧನ್ಯರು ಏಕೆಂದರೆ›‹ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.›
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›
‹“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.›
‹ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ”› ಎಂದು ಹೇಳಿದನು.
¶ “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.