ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಯೆಶಾಯ 55:5
مراجع Treasury of Scripture Knowledge في ಕನ್ನಡ IRV.
ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
‹ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ”› ಎಂದು ಹೇಳಿದನು.
¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, ‹“ತಂದೆಯೇ,›‹ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.›
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
¶ ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.