¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
TSK
TSK · ಯೆಶಾಯ 55:7
مراجع Treasury of Scripture Knowledge في ಕನ್ನಡ IRV.
‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
¶ ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.
ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
¶ ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
‹ನೀವು ಹೋಗಿ, ‘ನಾನು ಯಜ್ಞವನ್ನಲ್ಲ,›‹ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.›
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.›
‹ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”›
ಆದರೆ ಕರ್ತನು ಅವನಿಗೆ, ‹“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.›
‹ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.›
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.