¶ ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
TSK
TSK · ಯೆಶಾಯ 56:11
مراجع Treasury of Scripture Knowledge في ಕನ್ನಡ IRV.
¶ ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.
ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.
ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‹ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.›
ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.
ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.