ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.
TSK
TSK · ಯೆಶಾಯ 56:12
مراجع Treasury of Scripture Knowledge في ಕನ್ನಡ IRV.
ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.
¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
‹ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,›
‹ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,›
ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.