¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
TSK
TSK · ಯೆಶಾಯ 56:2
مراجع Treasury of Scripture Knowledge في ಕನ್ನಡ IRV.
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
‹ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.›
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›