TSK

TSK · ಯೆಶಾಯ 57:10

مراجع Treasury of Scripture Knowledge في ಕನ್ನಡ IRV.

العودة إلى المقطع

ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.

ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”

ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.