ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
TSK
TSK · ಯೆಶಾಯ 57:16
مراجع Treasury of Scripture Knowledge في ಕನ್ನಡ IRV.
ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.
ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.
ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,