ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
TSK
TSK · ಯೆಶಾಯ 57:19
مراجع Treasury of Scripture Knowledge في ಕನ್ನಡ IRV.
ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.
ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›
‹ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.›
ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
¶ ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.