TSK

TSK · ಯೆಶಾಯ 57:6

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?

ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.

ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.

ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.

‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.