¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
TSK
TSK · ಯೆಶಾಯ 58:13
مراجع Treasury of Scripture Knowledge في ಕನ್ನಡ IRV.
¶ ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
¶ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.