TSK

TSK · ಯೆಶಾಯ 58:4

مراجع Treasury of Scripture Knowledge في ಕನ್ನಡ IRV.

العودة إلى المقطع

ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.

ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.

ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

¶ ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.

ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.