¶ ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
TSK
TSK · ಯೆಶಾಯ 59:6
مراجع Treasury of Scripture Knowledge في ಕನ್ನಡ IRV.
ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
¶ ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.
ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.
ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.
ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.
ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,