ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
TSK
TSK · ಯೆಶಾಯ 59:8
مراجع Treasury of Scripture Knowledge في ಕನ್ನಡ IRV.
ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.
ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.
ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!
ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”