ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
TSK
TSK · ಯೆಶಾಯ 60:21
مراجع Treasury of Scripture Knowledge في ಕನ್ನಡ IRV.
ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
¶ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’
ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”
‹ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.›
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.