TSK

TSK · ಯೆಶಾಯ 61:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.

ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.

ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.

ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.

‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›

‹ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,›

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›‹ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ›‹ನಿಮ್ಮ ದುಃಖವು ಹೋಗಿ ಆನಂದ ಬರುವುದು.›

ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.