TSK

TSK · ಯೆಶಾಯ 62:1

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.

ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.

ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.

ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.