TSK

TSK · ಯೆಶಾಯ 63:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.

ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?

ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.

ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.

ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.

ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,

ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.