‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
TSK
TSK · ಯೆಶಾಯ 63:18
مراجع Treasury of Scripture Knowledge في ಕನ್ನಡ IRV.
ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, ‹“ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.
ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.