“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
TSK
TSK · ಯೆಶಾಯ 63:19
مراجع Treasury of Scripture Knowledge في ಕನ್ನಡ IRV.
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.
“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.