“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
TSK
TSK · ಯೆಶಾಯ 64:11
مراجع Treasury of Scripture Knowledge في ಕನ್ನಡ IRV.
ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.
ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
¶ “ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, ‹“ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.