TSK

TSK · ಯೆಶಾಯ 65:12

مراجع Treasury of Scripture Knowledge في ಕನ್ನಡ IRV.

العودة إلى المقطع

ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.

ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.

ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.

ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.

¶ “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

‹ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,›

‹ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.›