ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
TSK
TSK · ಯೆಶಾಯ 66:3
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.
ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.