ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
TSK
TSK · ಯೆಶಾಯ 7:13
مراجع Treasury of Scripture Knowledge في ಕನ್ನಡ IRV.
ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.
ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
¶ “ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
¶ ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.