ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,
TSK
TSK · ಯೆಶಾಯ 7:3
مراجع Treasury of Scripture Knowledge في ಕನ್ನಡ IRV.
¶ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.
¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.