ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
TSK
TSK · ಯೆಶಾಯ 9:14
مراجع Treasury of Scripture Knowledge في ಕನ್ನಡ IRV.
ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.
ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.
ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.
ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”
ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.
‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.
ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.