ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
TSK
TSK · ಯೆಶಾಯ 9:19
مراجع Treasury of Scripture Knowledge في ಕನ್ನಡ IRV.
ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
¶ ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.
¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
¶ ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.