¶ ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
TSK
TSK · ಯೆಶಾಯ 9:21
مراجع Treasury of Scripture Knowledge في ಕನ್ನಡ IRV.
ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
‹ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.›